ಸ ತಪೋ ತಪ್ಯತಾ! ಸ ತಪಸ್ತಪ್ವಾ
ಆನಂದಂ ಬ್ರಹ್ಮೇತಿ ವ್ಯಜಾನಾತ್..
Welcome!
ಖಾಲೀ ಇದ್ದ ರಸ್ತೆಯಲ್ಲಿ ಕಾರಿನ ವೇಗ ತಗ್ಗಿಸಿ ನಿಧಾನಕ್ಕೆ ಹೋಗುತ್ತಿದ್ದಾಗಲೇ ರಮೆಗೆ ಅನುಮಾನ ಬಂದಿತು - ಕಿಟ್ಟಿ ಏನೋ ಗಹನವಾದ ಆಲೋಚನೆಯಲ್ಲಿದ್ದಾನೆಂದು. ಚಳಿಗಾಲದ ಮುಂಜಾವು. ಕಿಟಕಿಗಳೆಲ್ಲಾ ಏರಿಸಿದ್ದವು. ಕಾರು ರಮೆಯ ತವರಿನ ಕಡೆ ಹೊರಟಿತ್ತು. ರೋಡು ಎಷ್ಟೇ ಹಾಳಾಗಿದ್ದರೂ, ಮೈಸೂರಿನಿಂದ ಶಿವಮೊಗ್ಗಕ್ಕೆ ಕೆ.ಆರ್. ಪೇಟೆ ಮುಖಾಂತರವೇ ಕಿಟ್ಟಿ ಹೋಗ್ತಿದ್ದದ್ದು. ಕೆ.ಆರ್.ಪೇಟೆ ದಾಟುವವರೆಗೂ, ರೋಡುಗಳ ಸ್ಥಿತಿಗೆ ಈತ ಬೈದುಕೊಳ್ಳೋದೂ ಸಹ ಪ್ರತೀ ಪ್ರಯಾಣದ ಅಂಗವಾಗಿಹೋಗಿತ್ತು. ಬಹಳ ಸಾರಿ ತಮಾಷೆಯೂ ಮಾಡ್ತಿದ್ದ, ನಾನು ಕಣ್ಣು ಮುಚ್ಚಿ ಓಡಿಸಿದ್ರೂ ಹೇಳಬಲ್ಲೇ ಕೆ. ಆರ್. ಪೇಟೆ ಮುಗಿಸಿ ಹಾಸನ ಜಿಲ್ಲೆಯ ರೋಡಿಗೆ ಗಾಡಿ ಇಳಿದದ್ದನ್ನ ಎಂದು. ಆದರೆ ಇತ್ತೀಚೆಗೆ ಎಲೆಕ್ಷನಿನ ಆಸುಪಾಸು ರೋಡಿನ ಹಳ್ಳಗಳಿಗೆಲ್ಲಾ ಅಲ್ಲಲ್ಲಿ ತೇಪೆ ಹಚ್ಚಿ ಪ್ರಯಾಣ ಅಷ್ಟೇನು ಪ್ರಯಾಸಕರವಾಗದಿರುವಂತೆ ರೋಡನ್ನ ಸಿದ್ಧಗೊಳಿಸಿದ್ದರು.
ಒಣಗಿದಾ ನಾಲಗೆಗೆ ಎರಡ್ಹನಿ ಸೋಕಿದಂತೆ
ಮುಳುಗುತಿಹ ಇರುವೆಗೊಂದು ಹುಲುಕಡ್ಡಿ ಆಸರಿಸಿದಂತೆ
ಜಾತ್ರೆಯಲ್ ತಪ್ಪಿದ ಕೂಸಿಗದರಮ್ಮನ ದನಿ ಕೇಳಿಸಿದಂತೆ
ಎಡೆಬಿಡದೆ ಸುರುಯುತಿರೋ ಮಳೆಯ ನಡುವೊಮ್ಮೆ ರವಿಯು ಇಣುಕಿದಂತೆ
ಜೀವನದ ವಿರಾಮವೂ...