ಐರನಿ - 1
'ನಿಮಗೊಂದು ಸ್ವಾಭಿಮಾನವಿದ್ದಲ್ಲಿ ದೇವಸ್ಥಾನಗಳಿಗೆ ಹೋಗೋದನ್ನ ನಿಲ್ಲಿಸಬೇಕು' ಭಾಷಣಕಾರ ಉದ್ರೇಕದಿಂದ ಹೇಳಿದ ದಲಿತ ಸಮಾವೇಶದಲ್ಲಿ.
ಬಯಲ ಮೂಲೆಯಲ್ಲೆಲ್ಲೋ ಸಣ್ಣ ದಿಬ್ಬದ ಮೇಲೆ ಕುಕ್ಕರಗಾಲಲ್ಲಿ ಚೆಡ್ಡಿ ಹಾಕಿ, ತಲೆಗೆ ಟವಲ್ ಸುತ್ತಿ ಕೂತಿದ್ದ ಕರಿ ಮುಖದ ತುಕಾರಾಮನ ಮೋಟು ಬೀಡಿ ಎಳೆಯುವ ವೇಗವೂ ಹೆಚ್ಚಿತು. 'ಟಿಣಿ ಣಿಣ್ ಟಿಣ್ ಟಿಣಿ ಣಿಣ್ ಟಿಣ್ ಟಿಣಿ ಣಿಣ್ ಟಿಣ್ ಟಿಣ್' ಅಂಗಿಯ ಜೇಬಲ್ಲಿದ್ದ ಮೊಬೈಲ್ ತೆಗೆದ 'ಹಲೋ....ಬಂದೆ ಸಾಮೆ..' ಭಾಷಣಕಾರನ ಧ್ವನಿಯನ್ನೂ ಮೀರಿದಂತೆ ಕೂಗಿ ಎದ್ದು ನಿಂತು ಟವಲು ತೆಗೆದ. ನಿಂತೇ ಬೀಡಿಯನ್ನ ಸರ ಸರ ಒಂದೈದು ಬಾರಿ ಎಳೆದು, ಪಕ್ಕೆಸೆದು ಹೊರಟ.